
ಆಗುಂಬೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರಂಗನಾಥ್ ಅಂತರಗಟ್ಟಿ ಮತ್ತುಅವರ ತಂಡದವರಿಂದ ಮದ್ಯಪಾನ ಮಾಡಿ ವಾಹನ ಚಲಾಯಿಸುತಿದ್ದ ಉತ್ತರ ಪ್ರದೇಶದ ಆಕಾಶ್ (30)ಎಂಬ ಆರೋಪಿಗೆ ರೂ.10,000 ದಂಡ ವಿಧಿಸಲಾಗಿದೆ..ಅ ಎಸ್ ಐ .ನಾಗೇಶ್, ದಿವಾಕರ್, ಅನಿಲ್ ರವರು ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಹೆಚ್ ಆರ್ ಎ ಕೆ 2783 ಕ್ಯಾಂಟರ್ ಚಾಲಕ ಆಕಾಶ್ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿರುವುದಾಗಿ.ಪ್ರಕರಣ ದಾಖಲಿಸಿ ನ್ಯಾಯಲಯಕ್ಕೆ ವರದಿ ಮಾಡಿದ್ದು ದಿನಾಂಕ 13 08 /2024 ರಂದು ಪ್ರಥಮ ದರ್ಜೆ ವ್ಯವಹಾರಗಳ ನ್ಯಾಯಾಲಯ ಮತ್ತು ಜೆಎಂಎಫ್ಸಿ ತೀರ್ಥಹಳ್ಳಿ ನ್ಯಾಯಲಯ ನ್ಯಾಯಾಧೀಶರು 10000 ರುಪಾಯಿ ದಂಡ ವಿಧಿಸಿ ಆದೇಶಿಸಿದ್ದಾರೆ.

