ರಾಜ್ಯದಲ್ಲಿ ವರುಣನ ಆರ್ಭಟಕ್ಕೆ ಜನ ಹೈರಾಣಾಗಿದ್ದಾರೆ. ಹಿಂಗಾರು ಮಳೆ ಎಫೆಕ್ಟ್ನಿಂದ ರಾಜ್ಯಾದ್ಯಂತ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಹವಾಮಾನ ಇಲಾಖೆ ಇನ್ನು 3ದಿನ ಬಾರಿ ಮಳೆ ಸಾಧ್ಯತೆ ಎಂದು ಹೇಳಿದೆ.ಇಂದಿನಿಂದ ಮೂರು ದಿನ ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.ಹಾವೇರಿ, ದಾವಣಗೆರೆ, ಕೊಡಗು, ಉಡುಪಿ, ತುಮಕೂರು, ಬಾಗಲಕೋಟೆ, ಧಾರವಾಡ, ಉತ್ತರ ಕನ್ನಡ, ಗದಗ, ಬೆಂಗಳೂರು, ರಾಮನಗರ, ಹಾಸನ ,ಶಿವಮೊಗ್ಗ, ಚಿಕ್ಕಮಗಳೂರು,ಉಡುಪಿ ಹಾಗೂ ಚಿತ್ರದುರ್ಗ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.








