• ನೂತನ ಸಂಸದರಿಗೆ ಜನರ ಮೆಚ್ಚುಗೆ

ಬೆಂಗಳೂರು ಗ್ರಾಮಾಂತರ ಬಿಜೆಪಿ ಸಂಸದ ಡಾ.ಸಿ.ಎನ್ ಮಂಜುನಾಥ್ ಅವರು ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗಾಯಗಳಿಗೆ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದಾರೆ. ರಾಮನಗರದ ಕನಕಪುರ- ಸಾತನೂರು ಮಾರ್ಗ ಮಧ್ಯೆ ಡಾ.ಸಿ.ಎನ್. ಮಂಜುನಾಥ್ ಅವರು ಕಾರಿನಲ್ಲಿ ತೆರಳುವಾಗ ಅದೇ ಮಾರ್ಗದಲ್ಲೇ ಅಪಘಾತ ಸಂಭವಿಸಿತ್ತು. ಅಪಘಾತವನ್ನು ನೋಡಿ ನೋಡಿ ತಮ್ಮ ಕಾರನ್ನು ನಿಲ್ಲಿಸಿದ ಸಂಸದರು ಗಾಯಾಳುಗಳನ್ನು ಪರೀಕ್ಷಿಸಿದ್ದಾರೆ. ಬಳಿಕ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಅಲ್ಲದೇ ದೂರವಾಣಿ ಕರೆ ಮಾಡಿ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದ್ದಾರೆ. ಸಂಸದರ ಈ ಕಾರ್ಯಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಈ ಮೂಲಕ ಮತ್ತೊಮ್ಮೆ ಜನರ ಹೃದಯ ಗೆದ್ದಿದ್ದಾರೆ.

Leave a Reply

Your email address will not be published. Required fields are marked *