
ಚಿತ್ರದುರ್ಗ :ಪಾರಿವಾಳ ರಕ್ಷಿಸಲು ಹೋಗಿ ಬಾಲಕ ಪ್ರಾಣ ಕಳೆದುಕೊಂಡಿರುವ ಘಟನೆಯೊಂದು ನಡೆದಿದೆ. ಮೊಳಕಾಲ್ಮೂರು ತಾಲೂಕಿನ ಹನುಮಾಪುರ ಗ್ರಾಮದಲ್ಲಿ ನಡೆದಿದೆ. ರಾಮಚಂದ್ರ (12) ಸಾವನ್ನಪ್ಪಿದ ಬಾಲಕ. ಆರನೇ ತರಗತಿಯಲ್ಲಿ ವ್ಯಾಸಂಗ ರಾಮಚಂದ್ರ, ವಿದ್ಯುತ್ ಕಂಬದಲ್ಲಿನ ತಂತಿಗೆ ಪಾರಿವಾಳ ಸಿಲುಕಿದ್ದನ್ನು ನೋಡಿದ್ದಾನೆ. ಜೀವನ್ಮರಣ ಮಧ್ಯೆ ಹೋರಾಡುತ್ತಿರುವುದನ್ನು ಗಮನಿಸಿದ ಈತ ಪಾರಿವಾಳ ರಕ್ಷಿಸಲೆಂದು ವಿದ್ಯುತ್ ಕಂಬ ಏರಿದ್ದಾನೆ. ಆಗ ವಿದ್ಯುತ್ ಸ್ಪರ್ಶಿಸಿ ಅಲ್ಲಿಯೇ ಸಾವನ್ನಪ್ಪಿದ್ದಾನೆ.


