• ಅಮಾನತಿಗೆ ಅಗ್ರಹಿಸಿ ಎಸ್’ಪಿ ಮತ್ತು ಡಿಸಿ ಗೆ ಮನವಿ

ಶಿವಮೊಗ್ಗ : ತೀರ್ಥಹಳ್ಳಿ ಪೊಲೀಸ್ ಇನ್ಸ್‌ಪೆಕ್ಟರ್‌ ಅಶ್ವಥ್ ಗೌಡ ಅವರ ಉದ್ಧಟತನ ಖಂಡಿಸಿ ಅವರ ಅಮಾನತ್ತಿಗೆ ಆಗ್ರಹಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಶಾಖೆ, ಶಿವಮೊಗ್ಗ ಪ್ರೆಸ್ ಟ್ರಸ್ಟ್ ವತಿಯಿಂದ ಇಂದು ಜಿಲ್ಲಾ ರಕ್ಷಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ತೀರ್ಥಹಳ್ಳಿಯಲ್ಲಿ ಪ್ರಜಾವಾಣಿ ವರದಿಗಾರ ನಿರಂಜನ್ ಅವರು ವರದಿಗಾಗಿ ರಥಬೀದಿಯಲ್ಲಿಫೋಟೋ, ವೀಡಿಯೊ ತೆಗೆಯುವಾಗ ಇಲ್ಲಿನ ಪೊಲೀಸ್‌ ಇನ್ಸ್‌ಪೆಕ್ಟರ್ ಅಶ್ವಥ್ ಗೌಡ ಬಲವಂತವಾಗಿ ಪತ್ರಕರ್ತ ನಿರಂಜನ್‌ ಅವರಿಂದ ಮೊಬೈಲ್ ಕಿತ್ತುಕೊಂಡು ಠಾಣೆಗೆ ಹೋಗಿರುತ್ತಾರೆ. ಮೊಬೈಲ್ ಪಡೆಯಲು ಠಾಣೆಗೆ ಹೋದ ನಿರಂಜನ್ ಅವರನ್ನು ಇನ್ಸ್‌ಪೆಕ್ಟರ್‌ ಅಶ್ವಥ್ ಗೌಡ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಸುಳ್ಳು ಕೇಸು ಹಾಕಿ ಜೈಲಿಗೆ.ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಾರೆ.ಇದನ್ನು ಪ್ರಶ್ನಿಸಿದ ಇತರೆ ಪತ್ರಕರ್ತರ ಜೊತೆಗೂ ಉದ್ದಟತನದಿಂದ ವರ್ತಿಸಿದ್ದಾರೆ ಎಂದು ಪತ್ರಕರ್ತರು ದೂರಿದರು.

ಇನ್ಸ್‌ಪೆಕ್ಟರ್‌ ಅವರ ವರ್ತನೆ ಖಂಡನೀಯ,ಸುಳ್ಳು ಕೇಸು ಹಾಕುವುದಾಗಿ ಪತ್ರಕರ್ತರನ್ನೇ ಬೆದರಿಸುವ ಈ ಪೊಲೀಸ್‌ ಅಧಿಕಾರಿ ಸರ್ವಾಧಿಕಾರಿಯಂತೆ ವರ್ತಿಸುತ್ತಿರುವುದು ಸ್ಪಷ್ಟವಾಗಿದೆ. ಈ ಮೂಲಕ ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಮಾಡಿದ್ದಾರೆ. ಪೊಲೀಸ್ ಅಧಿಕಾರಿಯ ಈವರ್ತನೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಶಿವಮೊಗ್ಗ ಜಿಲ್ಲಾ ಶಾಖೆ, ಶಿವಮೊಗ್ಗ ಪ್ರೆಸ್ ಟ್ರಸ್ಟ್ ತೀವ್ರವಾಗಿ ಖಂಡಿಸುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.ಪೊಲೀಸ್ ಅಧಿಕಾರಿ ಅಶ್ವಥ್ ಗೌಡ ಅವರನ್ನು ಈ ಕೂಡಲೆ ಅಮಾನತ್ತುಗೊಳಿಸಿ ಸೂಕ್ತ ಕಾನೂನುಕ್ರಮ ಕೈಗೊಳ್ಳಬೇಕೆಂದು ಸಂಘದ ಜಿಲ್ಲಾಧ್ಯಕ್ಷ ಕೆ.ವಿ. ಶಿವಕುಮಾರ್, ರಾಜ್ಯ ಸಮಿತಿ ನಿರ್ದೆಶಕ ಎನ್‌. ರವಿಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಟಿ. ಅರುಣ್, ಶಿವಮೊಗ್ಗ ಪ್ರೆಸ್‌ ಟ್ರಸ್ಟ್‌ನ ಅಧ್ಯಕ್ಷ ಎನ್. ಮಂಜುನಾಥ್, ಕಾರ್ಯದರ್ಶಿ ನಾಗರಾಜ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಆಗ್ರಹಿಸಿದ್ದಾರೆ.

ವರದಿ :ಅಕ್ಷಯ್ ಕುಮಾರ್

Leave a Reply

Your email address will not be published. Required fields are marked *