ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ತಯಾರಿ ಜೋರಾಗಿ ನಡೆದಿದೆ. ಈಗಾಗಲೇ ಗಜಪಡೆ ಪಯಣ ಆರಂಭವಾಗಿದೆ. ಈ ಹೊತ್ತಿನಲ್ಲೇ ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್ವೊಂದರಲ್ಲಿ ಸ್ಫೋಟಕಗಳು ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ.ನೀಲಿ ಬಣ್ಣದ ಕವರ್ ಒಂದರಲ್ಲಿ ಸ್ಪೋಟಕ ವಸ್ತು ಪತ್ತೆಯಾಗಿದ್ದು, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಹಾಗೂ ಬಾಂಬ್ ಸ್ಕ್ವಾಡ್ ದೌಡಾಯಿಸಿ ತಪಾಸಣೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.



