
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಹಾಗೂ ಅವರ ಗ್ಯಾಂಗ್ ನಡೆಸಿದ್ದ ಕ್ರೌರ್ಯದ ಎರಡೂ ಚಿತ್ರಗಳಲ್ಲಿ ಡಿ ಗ್ಯಾಂಗ್ ಪಟ್ಟಣಗೆರೆ ಶೆಡ್ನಲ ಕಥೆಗಳನ್ನು ತಿಳಿಸಿವೆ. ಯಾವುದೇ ರೀತಿಯ ಸಹಾನುಭೂತಿಗೂ ಈ ಗ್ಯಾಂಗ್ ಅರ್ಹರಲ್ಲ ಎನ್ನುವುದು ಈ ಫೋಟೋಗಳನ್ನು ನೋಡಿದರೆ ಸಾಬೀತಾಗುತ್ತದೆ.ಜೊತೆಗೆ ಫೋಟೋ ಈ ಫೋಟೋಗಳು ವೈರಲ್ ಆಗಿದ್ದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಘಟನೆ ನಡೆದ ದಿನದ ಮಧ್ಯಾಹ್ನ ಸುಮಾರು 3 ಗಂಟೆ ಹೊತ್ತಿಗೆ ತೆಗೆದ ಫೋಟೋ ಇದಾಗಿದೆ. ದರ್ಶನ್ ಬರುವುದಕ್ಕೂ ಮುನ್ನ ಒಂದು ಸುತ್ತು ಈ ಗ್ಯಾಂಗ್ ಹಲ್ಲೆ ನಡೆಸಿತ್ತು ಎನ್ನುವುದು ಗೊತ್ತಾಗಿದೆ. ಪಟ್ಟಣಗೆರೆ ಶೆಡ್ನ ನೆಲದ ಮೇಲೆ ಬಿದ್ದಿರುವ ರೇಣುಕಾಸ್ವಾಮಿ ಒಂದು ಫೋಟೋ ಇದಾಗಿದೆ. ನೆಲದ ಮೇಲೆ ರೇಣುಕಾಸ್ವಾಮಿ ಬಿದ್ದಿರುವ ಫೋಟೋವನ್ನು ಪಟ್ಟಣಗೆರೆ ಶೆಡ್ನ ನೌಕರನೊಬ್ಬ ತೆಗೆದಿದ್ದಾರೆ. ಆ ಬಳಿಕ ಶೆಡ್ನ ನೌಕರ ಈ ಫೋಟೋವನ್ನು ವಿನಯ್ನ ಮೊಬೈಲ್ಗೆ ಕಳಿಸಿದ್ದಾನೆ. ಅದೇ ವ್ಯಕ್ತಿಯನ್ನು ಪೊಲೀಸರು ಪ್ರತ್ಯಕ್ಷ ಸಾಕ್ಷಿ ಮಾಡಿಕೊಂಡಿದ್ದಾರೆ. ರೇಣುಕಾಸ್ವಾಮಿ ಬದುಕಿರುವಾಗಿನ ಫೋಟೊ ಇದಾಗಿದ್ದು, ಪಕ್ಕದಲ್ಲಿ ನಿಂತ ಲಾರಿ ಕೂಡ ಇದಕ್ಕೆ ಸಾಕ್ಷಿಯಾಗಿದೆ. KA 51 AF 0454 ನಂಬರಿನ ಲಾರಿ ಪ್ರಕರಣದಲ್ಲಿ ಪ್ರಮುಖ ಸಾಕ್ಷಿ ಎನಿಸಿಕೊಂಡಿದೆ



