ಉತ್ತರ ಕನ್ನಡ :ಜುಲೈ 16 ರಂದು ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುಡ್ಡ ಕುಸಿದು 11 ಜನ ಮಣ್ಣಿನಲ್ಲಿ ಕೊಚ್ಚಿ ಹೋಗಿದ್ದರು. ಈಗಾಗಲೇ 8 ಜನರನ್ನು ಪತ್ತೆ ಮಾಡಿದ್ದು, ಇನ್ನುಳಿದ ಕೇರಳ ಮೂಲದ ಲಾರಿ ಚಾಲಕ ಅರ್ಜುನ್, ಶಿರೂರಿನ ಲೋಕೇಶ್ ನಾಯ್ಕ ಮತ್ತು ಜಗನ್ನಾಥ ನಾಯ್ಕ ಎಂಬುವವರಿಗಾಗಿ ಹುಡುಕಾಟ ನಡೆಸಲಾಗಿತ್ತು.72 ದಿನಗಳ ನಂತರ ನದಿಯಲ್ಲಿ ಲಾರಿ, ಇಬ್ಬರು ಮೃತದೇಹಗಳು ಪತ್ತೆಯಾಗಿದ್ದು ಅರ್ಜುನ್ ಮೃತದೇಹ ಎರೆಡು ತುಂಡುಗಳಾಗಿ ಸಿಕ್ಕಿದೆ.


