ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಿದ ಸಿ ಎಂ

ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಆರಂಭವಾಗಿದ್ದು ಇದಕ್ಕೂ ಮುನ್ನಾ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು. ಈ ಮೂಲಕ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದರು.ಇದರ ನಡುವಲ್ಲಿ ಮಳೆ ಬಂದಿದ್ದು ಶುಭ ಘಳಿಗೆಯಾಗಿತ್ತು.

ಕಳೆದ ವರ್ಷ ಕಾಡಾನೆ ಸೆರೆ ಹಿಡಿಯುವ ಕಾರ್ಯಚರಣೆಯಲ್ಲಿ ಅರ್ಜುನ ಸಾವನ್ನಪ್ಪಿದ್ದಾನೆ. ಆದರೆ, ಅರ್ಜುನನ ನೆನಪು ಮಾತ್ರ ಮಾಸದೆ ಹಾಗೆಯೇ ಉಳಿದಿದೆ. ದಸರಾದಲ್ಲಿ ಅರ್ಜುನನ ಹೆಜ್ಜೆಯನ್ನು ಕಂಡವರು ಇಂದಿಗೂ ನೆನಪಿನಲ್ಲಿದೆ. ನಾಲ್ಕು ಶತಮಾನಗಳಿಗೂ ಹಿನ್ನೆಲೆ ಇರುವ ಮೈಸೂರು ದಸರಾ ಧಾರ್ಮಿಕ ಮಹತ್ವ ಇರುವ ಪ್ರಮುಖ ಹಬ್ಬ., ನವರಾತ್ರಿಯ ವೈಭವ ಹಾಗೂ ವಿಜಯದಶಮಿಯ ಸಂಭ್ರಮದ ಭಾಗವಾಗಿ ಹತ್ತು ದಿನಗಳ ಕಾಲ ನಡೆಯುವ ಉತ್ಸವವಾಗಿದೆ ಜಂಬೂಸವಾರಿ ಮೆರವಣಿಗೆಯಲ್ಲಿ ಸತತ 5ನೆ ಭಾರಿಗೆ ಚಿನ್ನದ ಅಂಬಾರಿಯನ್ನು ಅಭಿಮನ್ಯು ಹೊತ್ತಿದ್ದು ಜೊತೆಗೆ ಈ ಬಾರಿ 51 ಸ್ತಬ್ಧಚಿತ್ರಗಳ ಪ್ರದರ್ಶನಗೊಳ್ಳುತ್ತಿವೆ. ಮೈಸೂರು ಬಂಡಿಪಾಳ್ಯದ ಎಪಿಎಂಸಿ ಆವರಣದಲ್ಲಿ ಈ ಸ್ತಬ್ಧ ಚಿತ್ರ ನಿರ್ಮಾಣ ಕಾರ್ಯ ನಡೆದಿದ್ದು, 31 ಆಯಾ ಜಿಲ್ಲೆಗಳ ಕಲೆ, ಸಾಹಿತ್ಯ, ಸಂಸ್ಕೃತಿ ವೈಶಿಷ್ಟ್ಯ , ಆಚಾರ ವಿಚಾರ, ಭೌಗೋಳಿಕ ಹಿನ್ನೆಲೆ ಸಾರುವ ಸ್ಥಬ್ಧ ಚಿತ್ರಗಳಾಗಿವೆ.

Leave a Reply

Your email address will not be published. Required fields are marked *