


ಉಗ್ರರ ಅಟ್ಟಹಾಸಕ್ಕೆ ಬಲಿಯಾದ ಉದ್ಯಮಿ ಮಂಜುನಾಥ್ ರಾವ್ ಅವರ ಪಾರ್ಥವ ಶರೀರ ಶಿವಮೊಗ್ಗ ತಲುಪಿದ್ದು, ಇದೇ ವೇಳೆ ಹಿಂದು ಸಂಘಟನೆಗಳು ಪ್ರತಿಭಟನೆ ನಡೆಸಿದವು ಜೊತೆಗೆ ಉಗ್ರರನ್ನ ನೇಣು ಹಾಕಿದ್ದ ಅಣಕು ಪ್ರದರ್ಶನ ಹಾಗೂ ಹಿಂದೂಗಳ ತಂಟೆಗೆ ಬಂದರೆ ಸುಮ್ಮನಿರೆವು ಎಂಬ ಕೂಗು ಶಿವಮೊಗ್ಗ ದದ್ಯಂತ ಪ್ರತಿದ್ವನಿಸಿತು.

ಇನ್ನು ಮೃತ ಮಂಜುನಾಥ್ ಪಾರ್ಥವ ಶರೀರ ತುಮಕೂರಿನ ಕ್ಯಾತಸಂದ್ರದ ಟೋಲ್ ಗೇಟ್ ನಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ನಗರ ಶಾಸಕ ಜ್ಯೋತಿಗಣೇಶ್, ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿ ಸೇರಿದಂತೆ ಹಲವರು ಅಂತಿಮ ದರ್ಶನ ಪಡೆದರು.ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಶಿವಮೊಗ್ಗದಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಮನೆ ಮುಂಭಾಗದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗಿದೆ. ಬ್ರಾಹ್ಮಣ ಸಂಪ್ರದಾಯದಂತೆ ವಿಧಿ ವಿಧಾನಗಳು ನೆರವೇರಲಿದೆ.



