
ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ಪಾಕ್ ಸೈಬರ್ ದಾಳಿ ನಡೆಸುವ ಸಾಧ್ಯತೆ ಹಿನ್ನೆಲೆ ನಾಗರಿಕರು ಜಾಗೃತರಾಗಿರುವಂತೆ ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್ ಎಚ್ಚರಿಕೆ ಸಂದೇಶ ನೀಡಿದ್ದಾರೆ. ಅಪರಿಚಿತ ಲಿಂಕ್, ಇ-ಮೇಲ್ಗಳ ಮೇಲೆ ನಿಗಾವಹಿಸಿ.ಎಕ್ಸ್ಕ್ಲೂಸಿವ್ ನ್ಯೂಸ್ ಲಿಂಕ್ಗಳು ಹಾಗೂ ಎಪಿಕೆ ಫೈಲ್ಸ್, ಅಪರಿಚಿತ ಫಾರ್ವರ್ಡ್ ಲಿಂಕ್ ಕ್ಲಿಕ್ ಮಾಡದಂತೆ,

ವಾಟ್ಸಾಪ್ ಸೆಕ್ಯೂರಿಟಿ ಅಪ್ಡೇಟ್ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ.ತುರ್ತಾಗಿ ಆರ್ಮಿ ನೇಮಕಾತಿ ಮತ್ತಿತರ ಕುರಿತು ಅಪರಿಚಿತರಿಂದ ಮೇಲ್ಗಳನ್ನು ಸ್ವೀಕರಿಸಿದರೆ ಅವುಗಳನ್ನು ತೆರೆಯದಿರಿ. ಅವುಗಳ ಮೂಲಕ ನಿಮ್ಮ ವೈಯಕ್ತಿಕ ಮಾಹಿತಿಗಳನ್ನು ಕದಿಯುವ ಸಾಧ್ಯತೆಗಳಿವೆ.

ವಾಟ್ಸ್ಆಯಪ್ ಸೇರಿದಂತೆ ಇತರೆ ಸಾಮಾಜಿಕ ಜಾಲತಾಣಗಳ ಮೂಲಕ ಸ್ವೀಕರಿಸುವ ಅಪರಿಚಿತರ ಸಂದೇಶಗಳನ್ನು ತೆರೆಯದಿರಿ. ನಿಮ್ಮ ಪರಿಚಿತರಿಂದಲೇ ಅನುಮಾನಾಸ್ಪದ ಫೈಲ್ಗಳನ್ನು ಸ್ವೀಕರಿಸಿದರೂ ಸಹ ತೆರೆಯದಿರಿ ಹಾಗೂ ಇತರರೊಂದಿಗೆ ಹಂಚಿಕೊಳ್ಳದಿರಿ,

ಬದಲಿಗೆ ಅವುಗಳನ್ನು ಡಿಲೀಟ್ ಮಾಡುವುದು ಸೂಕ್ತ ಎಂದು ಸಂದೇಶ ನೀಡಿದ್ದಾರೆ.

