
ಇಂಡಿಯನ್ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಟೂರ್ನಿಯ 18 ನೇ ಅವೃತ್ತಿ ಯ ಫೈನಲ್ ಪಂದ್ಯ ಇಂದು ಗುಜರಾತ್ನ ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಿತು. ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟಾಸ್ ನಲ್ಲಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು ಪಂಜಾಬ್ ಕಿಂಗ್ಸ್ ಛೆಸಿಂಗ್ ಆಟಕ್ಕೆ ಒಪ್ಪಿಗೆ ಸೂಚಿಸಿತು.

ಇನ್ನು ಇದೆ ವೇಳೆ ಆರ್ಸಿಬಿ ಗೆಲುವಿಗಾಗಿ ಕರ್ನಾಟಕದಾದ್ಯಂತ ಅಭಿಮಾನಿಗಳ ಹಾರೈಕೆ, ಪ್ರಾರ್ಥನೆ ನಡೆದ ಪ್ರತಿಫಲವಾಗಿ .ಬೆಂಗಳೂರು ತಂಡ ಪಂಜಾಬ್ ತಂಡವನ್ನು ರನ್ ಬಾರಿಸಿ ಗಳೊಂದಿಗೆ ರೋಚಕದೊಂದಿಗೆ ಗೆಲುವಿನ ನಗೆ ಬೀರಿತು.

ಈ ವೇಳೆ ಕ್ರಮವಾಗಿ ಬೆಂಗಳೂರಿನಲ್ಲಿ ಪೊಲೀಸರಿಗೆ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದ್ದು ಸಂಭ್ರಮಾಚರಣೆ ನೆಪದಲ್ಲಿ ಯಾರೂ ಅತಿರೇಕದ ವರ್ತನೆ ತೋರದಂತೆ, ಒಂದು ವೇಳೆ ತೋರಿದರೆ ಕ್ರಮ ಕೈಗೊಳ್ಳುವಂತೆ ಮುನ್ನೆಚ್ಚರಿಕೆ ವಹಿಸಲು ಪೊಲೀಸ್ ಕಮಿಷನರ್ ದಯಾನಂದ್ ಸೂಚನೆ ನೀಡಿದ್ದಾರೆ. ಎಲ್ಲ ಡಿಸಿಪಿಗಳು ಹಾಗೂ ಎಸಿಪಿಗಳಿಗೆ ನಿರ್ದೇಶನ ನೀಡಲಾಗಿದೆ.

