
- ಆಗುಂಬೆ ಹೋಂ ಸ್ಟೇಯೊಂದರಲ್ಲಿ ತಂಗಿದ್ದ ಕಲಾವಿದ
- ಕಾಂತರಕ್ಕೆ 3ನೇ ಬಲಿ – ಸಾರ್ವಜನಿಕ ವಲಯದಲ್ಲಿ ಚರ್ಚೆ
ತೀರ್ಥಹಳ್ಳಿ : ತಾಲೂಕಿನ ಆಗುಂಬೆ ಹೋಮ್ ಸ್ಟೇ ಒಂದರಲ್ಲಿ ತಂಗಿದ್ದ ಕೇರಳ ಮೂಲದ ಮಿಮಿಕ್ರಿ ಕಲಾವಿದ ನಿಜು ವಿ ಕೆ ಕಾಂತರ ಚಿತ್ರ ಚಿತ್ರೀಕರಣಕ್ಕಾಗಿ ತಂಗಿದ್ದು ಬುಧವಾರ ರಾತ್ರಿ ಎದೆ ನೋವು ಕಾಣಿಸಿಕೊಂಡಿದ್ದು ನಂತರ ತಕ್ಷಣ ತೀರ್ಥಹಳ್ಳಿ ಆಸ್ಪತ್ರೆಗೆ ರವಾನಿಸುವ ಮಾರ್ಗ ಮದ್ಯೆ

ಕೊನೆಯಿಸಿರೆಳೆದಿದ್ದಾರೆ.ಮೃತ ದೇಹ ತೀರ್ಥಹಳ್ಳಿ ಜೆ ಸಿ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು ಕುಟುಂಬದವರು ಕೇರಳದಿಂದ ಆಗಮಿಸುತ್ತಿದ್ದಾರೆ ಎಂಬ ಮೂಲಗಳು ಸಿಕ್ಕಿವೆ.
ಇನ್ನು ಕಾಂತರ ಶುರುವಾಗಿದ್ದ ಹಿನ್ನಲೆಯಲ್ಲಿ ಒಟ್ಟು 3 ಸಾವುಗಳು ಆಗಿದ್ದು ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

