Oplus_131072

ತೀರ್ಥಹಳ್ಳಿ ಕ್ಷೇತ್ರ ಶಿಕ್ಷಣಾಧಿಕಾರಿ ಘೋಷಣೆ – ಹೊನ್ನೇತಾಳು ಶಾಲೆಗೆ ಜು16 ರಂದು ರಜೆ – ಹೊಸನಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ – ಶಿವಮೊಗ್ಗ ಜಿಲ್ಲಾಡಳಿತ

ಶಿವಮೊಗ್ಗ : ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ಸಾಗರ ಹಾಗೂ ಹೊಸನಗರ ತಾಲೂಕಿನ ಶಾಲಾ – ಕಾಲೇಜುಗಳಿಗೆ ಜೂ. 16 ರ ಸೋಮವಾರ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.

ಈ ಕುರಿತಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಸೋಮವಾರ ಬೆಳಿಗ್ಗೆ ಮಾಹಿತಿ ನೀಡಿದ್ದಾರೆ. ಈ ಎರಡು ತಾಲೂಕುಗಳಲ್ಲಿ ವ್ಯಾಪಕ ಮಳೆ ಹಿನ್ನೆಲೆಯಲ್ಲಿ, ಜೂ. 16 ರಂದು ಅಂಗನವಾಡಿ, ಶಾಲೆ, ಕಾಲೇಜುಗಳೀಗೆ ರಜೆ ಘೋಷಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಜೊತೆಗೆ ತೀರ್ಥಹಳ್ಳಿ ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ಮಳೆ ಹಿನ್ನಲೆಯಲ್ಲಿ ಶಾಲಾ ಎಸ್ ಡಿ ಎಂ ಸಿ ಗೆ ರಜೆ ನೀಡುವ ಅಧಿಕಾರ ಘೋಷಣೆ ಮಾಡಿದ್ದು ಹೊನ್ನೇತಾಳು ಶಾಲೆಗೆ ಎಸ್ ಡಿ ಎಂ ಸಿ ರಜೆ ನೀಡಿದೆ ಹಾಗೂ ಮುಂಬರುವ ದಿನಗಳಲ್ಲಿ ರಜೆಯನ್ನು ಸರಿದೂಗಿಸಲಾಗುವುದು ಎಂದು ಶಾಲಾ ಎಸ್ ಡಿ ಎಂ ಸಿ ತಿಳಿಸಿದೆ.

Leave a Reply

Your email address will not be published. Required fields are marked *