ತೀರ್ಥಹಳ್ಳಿ ತಾಲೂಕು ಬಸವಾನಿ‌ ಸಮೀಪದ ಲಕ್ಷ್ಮೀಪುರ ಗ್ರಾಮದಲ್ಲಿ ಅಡಿಕೆ ಗೊನೆ ಕೀಳುವಾಗ ದೋಟಿ ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ಸ್ಪರ್ಶಿಸಿ ಕಾರ್ಮಿಕ ಮೃತಪಟ್ಟಿದ್ದಾರೆಈ ಘಟನೆ ಶನಿವಾರ ಸಂಜೆ ಘಟನೆ ಸಂಭವಿಸಿದ್ದು,

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ದೋರಗಲ್ಲು ಗ್ರಾಮದ ಸತೀಶ್ (50) ಮೃತ ವ್ಯಕ್ತಿ. ಎಂದು ಗುರುತಿಸಲಾಗಿದೆ.ಸತೀಶ್​ ಇವರು ಈ ಭಾಗದಲ್ಲಿ ಹಲವು ವರ್ಷಗಳಿಂದ ಗೊನೆಗಾರರಾಗಿ ಕೆಲಸ ಮಾಡುತ್ತಿದ್ದರು. ಲಕ್ಷ್ಮೀಪುರದ ರೈತರಿಬ್ಬರ ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದ್ದು. ತೀರ್ಥಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *