
ಶಿವಮೊಗ್ಗ : ಜಿಲ್ಲೆಯ ಕಾಂಗ್ರೆಸ್ ನಾಯಕರುಗಳಾದ ಡಾ ಆರ್ ಎಂ ಮಂಜುನಾಥ್ ಗೌಡ, ಹಾಗೂ ಸಾಗರ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು, ಶ್ರೀಕಾಂತ್ ದೆಹಲಿಯ ರಾಮಲೀಲಾ ಮೈದಾನದಲ್ಲಿ ಎ.ಐ.ಸಿ.ಸಿ ವತಿಯಿಂದ ಮತದಾನ ಪ್ರಕ್ರಿಯೆಯನ್ನು ಮತಗಳ್ಳತನದಿಂದ ಪ್ರಜಾಪ್ರಭುತ್ವಕ್ಕೆ ದ್ರೋಹ ಬಗೆಯುತ್ತಿರುವ

ಹಾಗೂ ಸಂವಿಧಾನಾತ್ಮಕ ಮೂಲ ಆಶಯವನ್ನು ಹತ್ತಿಕ್ಕುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಧ್ವನಿ ಎತ್ತಲು ನಡೆದ ವೋಟ್ ಚೋರ್ ಗದ್ದಿ ಛೋಡ್ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಭಾಗಿಯಾದರು.ಈ ವೇಳೆ ತೀರ್ಥಹಳ್ಳಿಯ ಕಾಂಗ್ರೆಸ್ ನ ಯುವ ನಾಯಕರಾದ ಕುರುವಳ್ಳಿ ನಾಗರಾಜ್ ಈ ಸಂದರ್ಭದಲ್ಲಿ ಭಾಗಿಯಾಗಿದ್ದರು.
