- ಕತ್ತಿ ಕೈಯಲ್ಲಿ ಹಿಡಿದು ನರ್ತಿಸಿ ವಿಕೃತಿ ಮೆರೆದಿದ್ದು ಯಾಕೆ?
ಮದ್ಯಪಾನ ಮಾಡಿ ಪತ್ನಿಯನ್ನು ಕೊಂದು ಕೈಯಲ್ಲಿ ಕತ್ತಿ ಹಿಡಿದು ಡ್ಯಾನ್ಸ್ ಮಾಡಿ ವಿಕೃತಿ ಮೆರೆದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬಸ್ರೂರಿನಲ್ಲಿ ನಡೆದಿದೆ.ಅನಿತಾ (38) ಪತಿಯಿಂದ ಹತ್ಯೆಯಾದ ದುರ್ದೈವಿಉತ್ತರ ಕನ್ನಡ ಮೂಲದ ಲಕ್ಷ್ಮಣ ಮತ್ತು ಅನಿತಾ ದಂಪತಿ ಕಾಶಿಮಠದಲ್ಲಿ ತೋಟ ನೋಡಿಕೊಂಡಿದ್ದರು. ನಾಲ್ಕು ತಿಂಗಳ ಹಿಂದೆ ಬಂದಿದ್ದ ಇವರು ಉಡುಪಿಯಲ್ಲಿ ನೆಲೆಸಿದ್ದರು. ಶನಿವಾರ (ಆ.3) ಸಂಜೆ ಪಾನಮತ್ತರಾಗಿ ಬಂದ ಲಕ್ಷ್ಮಣ, ಪತ್ನಿಗೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಬಳಿಕ ಅಡುಗೆ ಮನೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಆಕೆಯನ್ನು ಕಂಡು ಬಾಗಿಲನ್ನು ಹಾಕಿಕೊಂಡು ಕತ್ತಿ ಕೈಯಲ್ಲಿ ಹಿಡಿದುಕೊಂಡು ನರ್ತಿಸುತ್ತಾ ವಿಕೃತಿ ಮೆರೆದಿದ್ದಾನೆ.ಕಂಡ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

