ಸಾಗರ :ಕೌಟುಂಬಿಕ ಕಲಹಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಎಂಬ ಗ್ರಾಮದಲ್ಲಿ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ರಂಜಿತಾ (28) ಎಂದು ಗುರುತಿಸಲಾಗಿದೆ.

ಹಬ್ಬಕ್ಕೆ ತವರು ಮನೆಗೆ ಬಂದಿದ್ದಾಗ ಮಹಿಳೆ ನೇಣಿಗೆ ಶರಣಾಗಿದ್ದಾರೆ.ಮದುವೆಯಾಗಿ ಡೈವೋರ್ಸ್ ಪಡೆದಿದ್ದ ರಂಜಿತಾ ನಂತರ 2 ನೇ ಮದುವೆಯಾಗಿದ್ದರು. ರಂಜಿತಾ ಸೂಸೈಡ್ ಮಾಡಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಕೌಟುಂಬಿಕ ಕಲಹಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *