• ನನಗೆ ನ್ಯಾಯಾಲಯದ ಮೇಲೆ ನಂಬಿಕೆಯಿದೆ – ಪ್ರಜ್ವಲ್ ರೇವಣ್ಣ

ಒಂದು ತಿಂಗಳ ಬಳಿಕ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷರಾಗಿದ್ದಾರೆ. ವಿದೇಶದಲ್ಲಿ ಅಡಗಿ ಕೂತಿರುವ ಪ್ರಜ್ವಲ್‌ ಮೇ 31ಕ್ಕೆ ಎಸ್‌ಐಟಿ ತನಿಖೆಗೆ ಬರುವುದಾಗಿ ಖುದ್ದು ವಿಡಿಯೋ ರಿಲೀಸ್‌ ಮಾಡಿ ಹೇಳಿಕೆ ನೀಡಿದ್ದಾರೆ. ಪ್ರಕರಣ ಸಂಬಂಧ ಮಾತನಾಡುತ್ತಾ ರಾಜ್ಯದ ಹಾಗೂ ಜೆಡಿಎಸ್ ಕಾರ್ಯಕರ್ತರ ಕ್ಷೆಮೆಯಾಚಿಸಿದ್ದಾರೆ. ನನ್ನ ರಾಜಕೀಯ ಬೆಳವಣಿಗೆ ಸಹಿಸಲಾಗದೇ ಕೆಲ ಶಕ್ತಿಗಳು ನನ್ನ ವಿರುದ್ಧ ಈ ರೀತಿ ಪಿತೂರಿ ಮಾಡಿದ್ದಾರೆ. ಹೀಗಾಗಿ ಎಲ್ಲರ ಕ್ಷಮೆ ಕೇಳುವೆ ಎಂದಿದ್ದಾರೆ.ನಾನೇ ಸ್ವತಃ ಶುಕ್ರವಾರ ಮೇ 31ರಂದು ಎಸ್‌ಯಟಿ ಮುಂದೆ ಬಂದು ಸಂಪೂರ್ಣವಾಗಿ ಪ್ರಕರಣದ ತನಿಖೆಯಲ್ಲಿ ಭಾಗಿಯಾಗುತ್ತೇನೆ. ನನಗೆ ನ್ಯಾಯಾಲಯದ ಮೇಲೆ ನಂಬಿಕೆಯಿದೆ. ನನ್ನ ಮೇಲೆ ದಾಖಲಾಗಿರುವಂತಹ ಸುಳ್ಳು ಪ್ರಕರಣಗಳಿಂದ ಮುಕ್ತವಾಗಿ ಹೊರಗೆ ಬರುವ ವಿಶ್ವಾಸವಿದೆ. ನನ್ನ ಮೇಲೆ ದೇವರು, ಜನರು ಹಾಗೂ ಕುಟುಂಬದ ಆಶೀರ್ವಾದ ಇರಲಿ ಎಂದು ಬೇಡಿಕೊಳ್ಳುತ್ತೇನೆ ಎಂದರು.

Leave a Reply

Your email address will not be published. Required fields are marked *