
ಬೆಂಗಳೂರು : ಗ್ರಾಮೀಣ ಪ್ರದೇಶದ ಆನೇಕಲ್ನ ಮದ್ದೂರಮ್ಮ ದೇವಿಯ ರಥೋತ್ಸವ ವೇಳೆ 100 ಅಡಿ ಎತ್ತರದ ರಥ ಬಿದ್ದ ದುರಂತದಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ. ಎಂಬ ಮಾಹಿತಿ ದೊರೆತಿದೆ.

ಇನ್ನು ಮದ್ದೂರಮ್ಮ ದೇವಾಲಯದ ರಥ ಬಿದ್ದಿರುವ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಸ್ತೆಯಲ್ಲಿ ರಥವನ್ನು ನೂರಾರು ಜನರು ಸೇರಿ ಎಳೆದುಕೊಂಡು ಹೋಗುವಾಗ, 100 ಅಡಿ ಎತ್ತರದ ತೇರು ಇದ್ದಕ್ಕಿದ್ದಂತೆ ಒಂದು ಕಡೆಗೆ ವಾಲಿಕೊಂಡು ಧರೆಗುರುಳಿದೆ.

ಇದಕ್ಕೆ ಸ್ಥಳೀಯರು ಹೇಳುವ ಮಾಹಿತಿ ಪ್ರಕಾರ ಜೋರಾದ ಗಾಳಿಯ ಕಾರಣದಿಂದಾಗಿ ರಥದ ಸಮತೋಲನವು ತಪ್ಪಿತು. ಆದ್ದರಿಂದ ಅದು ಇದ್ದಕ್ಕಿದ್ದಂತೆ ಒಂದು ಕಡೆಗೆ ಬಿದ್ದಿತು ಎಂದಿದ್ದಾರೆ.


