• ಮಂಗಳೂರಿನ ಹೊರ ವಲಯದಲ್ಲಿ ಘಟನೆ
  • ತಾಯಿಯಿಂದ ಪೊಲೀಸರಿಗೆ ದೂರು

ಮಂಗಳೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, ಬೀಡಿಯ ತುಂಡು ನುಂಗಿ 10 ತಿಂಗಳ ಮಗು ಸಾವನ್ನಪ್ಪಿದೆ.ಮಂಗಳೂರು ನಗರದ ಹೊರವಲಯದ ಅಡ್ಯಾರ್ನಲ್ಲಿ ಮನೆಯಲ್ಲಿ ತಂದೆ ಸೇದಿ ಬಿಸಾಡಿದ್ದ ಬೀಡಿಯ ತುಂಡನ್ನು ನುಂಗಿ 10 ತಿಂಗಳ ಮಗು ಮೃತಪಟ್ಟಿದೆ.

ಬೀಡಿ ತುಂಡು ಗಂಟಲಲ್ಲಿ ಸಿಲುಕಿಕೊಂಡು ಅಸ್ವಸ್ಥಗೊಂಡಿದ್ದ ಮಗು ಚಿಕಿತ್ಸೆ ಫಲಿಸದೇ ವೆನ್ಲಾಕ್‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದೆ.ಅಡ್ಯಾರ್ನಲ್ಲಿ ವಾಸವಿದ್ದ ಬಿಹಾರ ಮೂಲದ ದಂಪತಿಯ ಮಗು ಅನೀಶ್ ಕುಮಾರ್ ಮೃತ ಮಗು,

ತನ್ನ ಗಂಡನ ನಿರ್ಲಕ್ಷ್ಯದಿಂದಲೇ ಮಗು ಮೃತಪಟ್ಟಿದೆ.ಹಲವು ಬಾರಿ ಹೇಳಿದ್ದರು ಚಾಳಿ ಬಿಡದ ಗಂಡನ ಮೊಂಡುತನದಿಂದ ಮಗುವಿನ ಪ್ರಾಣ ಹೋಗಿದೆ ಎಂದು ಮಗುವಿನ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ.

Oplus_131072

Leave a Reply

Your email address will not be published. Required fields are marked *