ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಮುಕ್ತಾಯಗೊಂಡಿದ್ದು, ಮತದಾರರಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಇಂದು ಸಂಜೆ 5 ಗಂಟೆವರೆಗೆ ಶಿಗ್ಗಾಂವ್ ನಲ್ಲಿ 75.07% ಮತ್ತು ಸಂಡೂರಿನಲ್ಲಿ 71.47% ರಷ್ಟು ಮತದಾನವಾಗಿದ್ದು, 84.26% ರಷ್ಟು ಮತದಾನವಾಗಿದೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಮತ್ತು ಎನ್ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಡುವೆ ಭಾರೀ ಪೈಪೋಟಿ ಇದೆ ಎನ್ನಲಾಗುತ್ತಿದ್ದು, ಇಬ್ಬರಲ್ಲಿ ಯಾರು ಶಾಸಕರಾಗಲಿದ್ದಾರೆ ಎಂಬುದನ್ನು ಮದಾರರು ನಿರ್ಣಯಿಸಲಿದ್ದಾರೆ.

ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಯಾಸೀರ್ ಖಾನ್ ಪಠಾಣ್ ಮತ್ತು ಎನ್ಡಿಎ ಅಭ್ಯರ್ಥಿ ಭರತ್ ಬೊಮ್ಮಾಯಿ ನಡುವೆ ಬಿಗ್ ಫೈಟ್ ಇದೆ ಎನ್ನಲಾಗುತ್ತಿದೆ. ಕ್ಷೇತ್ರದಲ್ಲಿ ಒಟ್ಟು 2,37,525 ಮತದಾರರಿದ್ದು, ಈ ಪೈಕಿ 1,21,443 ಪುರುಷರು ಮತ್ತು 1,16,076 ಮಹಿಳೆಯರು ಹಾಗೂ ಇತರ 6 ಮತದಾರರಿದ್ದಾರೆ. ಕ್ಷೇತ್ರದಲ್ಲಿ ಒಟ್ಟು 241 ಮತಗಟ್ಟೆಗಳಿದ್ದು ಅವುಗಳಲ್ಲಿ 92 ಸೂಕ್ಷ್ಮ ಮತಟ್ಟೆಗಳಿವೆ.


ಸಂಡೂರು ಕ್ಷೇತ್ರದಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ಬಂಗಾರು ಹನುಮಂತು ಮತ್ತು ಕಾಂಗ್ರೆಸ್ನಿಂದ ಅನ್ನಪೂರ್ಣ ತುಕಾರಾಂ ಸ್ಫರ್ಧೆಗೆ ಇಳಿದಿದ್ದಾರೆ. ಈ ಕ್ಷೇತ್ರದಲ್ಲಿ ಒಟ್ಟು 253 ಮತಗಟ್ಟೆಗಳಿದ್ದು, ಅವುಗಳಲ್ಲಿ 60 ಸೂಕ್ಷ್ಮ ಮತಗಟ್ಟೆಗಳು ಎಂದು ಗುರುತಿಸಲಾಗಿದೆ.ನವೆಂಬರ್ 23ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.








