ಶಿವಮೊಗ್ಗ : ಕರ್ನಾಟಕ ರಾಜ್ಯದ ಅಂಗನವಾಡಿ ಕಾರ್ಯಕರ್ತೆ ಅಥವಾ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಾಗ ಉರ್ದು ಭಾಷೆಯನ್ನು ಆಯ್ಕೆ ಮಾಡದಿದ್ದರೆ ಅರ್ಜಿಯ ಮುಂದಿನ ಪ್ರಕ್ರಿಯೆ ಮಾಡಲು ಸಾಧ್ಯವಿಲ್ಲ. ಈ ಮೂಲಕ ಕರ್ನಾಟಕ ಸರ್ಕಾರ ಕ್ರೈಸ್ತರಿಗೆ ಹಿಂದುಗಳಿಗೆ ಒಂದು ರೀತಿಯಲ್ಲಿ ಅನ್ಯಾಯ ಮಾಡುತ್ತಿರುವುದು ಸ್ಪಷ್ಟ ಗಮನಕ್ಕೆ ಬರುತ್ತದೆ. ಕರ್ನಾಟಕದಲ್ಲಿ ಕನ್ನಡವೇ ರಾಜ್ಯಭಾಷೆ. ಈ ರೀತಿ ಉರ್ದು ಭಾಷೆಗೆ ಕಡ್ಡಾಯ ಮಾಡಿ ಕನ್ನಡಿಗರನ್ನು ಸಹ ಅವಮಾನ ಮಾಡಿರುವುದು ಕಂಡುಬರುತ್ತದೆ. ಎಂದು ಹಿಂದೂ ಜನಜಾಗೃತಿ ಸಮಿತಿಯ ಶ್ರೀ.ವಿಜಯ ರೇವಣಕರ ಇವರು ಆಗ್ರಹಿಸಿದರು. ಈ ಸಂದರ್ಭದಲ್ಲಿ ಕ್ಷತ್ರಿಯ ಮರಾಠ ಸಮಾಜದ ಶಿವಮೊಗ್ಗ ಜಿಲ್ಲಾಧ್ಯಕ್ಷರಾದ ಶ್ರೀ. ದಿನೇಶ್ ಚೌಹಾಣ್,ಎಂ ಪ್ರಭಾಕರ್ ಮತ್ತು ಶಾಮ್ ಸುಂದರ್ ಪರಿಸರ ರಮೇಶ, ಗೋರಕ್ಷಣ ಸದಸ್ಯರಾದ ಶ್ರೀ.ಜಗದೀಶ್, ಆಯನೂರು ಶ್ರೀ. ನವೀನ ಕುಮಾರ ಮತ್ತು ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು ಉಪಸ್ಥಿತರಿದ್ದರು.

ಕಾಂಗ್ರೆಸ್ ಶಾಸನವಿರುವ ಕರ್ನಾಟಕದಲ್ಲಿ ಪದೇ ಪದೇ ಹಿಂದೂಗಳ ಬಗ್ಗೆ ತುಷ್ಟೀಕರಣ ನೀತಿ ಅನುಸರಿಸುವುದು ಗಮನಕ್ಕೆ ಬರುತ್ತಿದೆ. ಕೇವಲ ಇದೊಂದೇ ಘಟನೆ ಅಲ್ಲದೆ ಇತ್ತೀಚಿಗೆ ರಾಜ್ಯದಲ್ಲಿ ನಡೆದ ಅನೇಕ ಘಟನೆಗಳು ಕಾಂಗ್ರೆಸ್ ನ ಓಲೈಕೆ ರಾಜಕಾರಣದ ಷಡ್ಯಂತ್ರವನ್ನು ಎತ್ತಿ ತೋರಿಸುತ್ತದೆ. ಈ ಬಾರಿ ಶಿಕ್ಷಕ ದಿನಾಚರಣೆ ವೇಳೆ, ಉಡುಪಿಯ ಪ್ರಾಂಶುಪಾಲರಾದ ಬಿ ಜಿ.ರಾಮಕೃಷ್ಣ ಇವರು ಹಿಜಾಬ್ ಘಟನೆ ವೇಳೆ ಹಿಜಾಬ್ ಧರಿಸಿ ಬರಲು ವಿರೋಧಿಸಿದ್ದರೆಂದು ಅವರಿಗೆ ಸಲ್ಲಬೇಕಿದ್ದ ’ಉತ್ತಮ ಶಿಕ್ಷಕ’ ಪ್ರಶಸ್ತಿ ರದ್ದುಗೊಳಿಸಲಾಯಿತು.ನಾಗಮಂಗಲದಲ್ಲಿ ನಡೆಯುತ್ತಿದ್ದ ಶಾಂತಿಯುತ ಗಣೇಶೋತ್ಸವದ ಮೇಲೆ ಮತಾಂಧರು ಕಲ್ಲು ತೂರಾಟ ಮಾಡಿದ್ದರೂ, ಈ ಪ್ರಕರಣದಲ್ಲಿ ಆರೋಪಿ ನಂ ೧ ರಿಂದ ೨೩ ವರೆಗೆ ಹಿಂದೂ ಕಾರ್ಯಕರ್ತರ ಹೆಸರುಗಳನ್ನು ಸೇರಿಸಲಾಗಿತ್ತು. ಅಷ್ಟೇ ಅಲ್ಲದೆ ಈ ಬಾರಿಯ ಗಣೇಶೋತ್ಸವ ಆಚರಣೆ ಸಮಯದಲ್ಲಿ ಸಹ ಪ್ರಸಾದಕ್ಕೆ ಬಿಬಿಎಂಪಿ FSSAI ಕಡ್ಡಾಯಗೊಳಿಸಿತ್ತು.ಈ ಎಲ್ಲ ಘಟನೆಗಳನ್ನು ನೋಡುವಾಗ ಕಾಂಗ್ರೆಸ್ ಹಿಂದೂಗಳ ಮೇಲೆ ನಡೆಸುತ್ತಿರುವ ಅನ್ಯಾಯಕ್ಕೆ ಕೊನೆಯೇ ಇಲ್ಲದಂತಾಗಿದೆ. ಈಗ ಅಂಗನವಾಡಿ ಹುದ್ದೆಗಳ ಬಗ್ಗೆಯೂ ಸರಕಾರದ ಈ ನಿಲುವಿನಿಂದ ಜನತೆಯಲ್ಲಿ ಅತ್ಯಂತ ಭಯದ ವಾತಾವರಣ ನಿರ್ಮಾಣವಾಗಿದ್ದು ಸಮಸ್ತ ಹಿಂದೂಗಳು ಇದರ ಬಗ್ಗೆ ಧ್ವನಿ ಎತ್ತುತ್ತಿದ್ದಾರೆ.ಹಾಗಾಗಿ ಇಲಾಖೆಯ ಈ ಆದೇಶವನ್ನು ಕೂಡಲೇ ಹಿಂಪಡೆದು ಜಾಲತಾಣದಲ್ಲಿ ಅವಶ್ಯಕ ಬದಲಾವಣೆ ಮಾಡಬೇಕೆಂದು ಹಿಂದೂ ರಾಷ್ಟ್ರ ಜಾಗೃತಿಯ ಸಮನ್ವಯಕರಾದ ವಿಜಯ ರೇವಣಕರಆಂದೋಲನದ ಮೂಲಕ ಆಗ್ರಹಿಸಲಾಗಿದೆ.




