ಕಲರ್ಸ್ ಕನ್ನಡ ವಾಹಿನಿಯ ಗಿಚ್ಚಿ ಗಿಲಿ ಗಿಲಿ ಸೀಸನ್-3 ರಿಯಾಲಿಟಿ ಶೋ ವಿಜೇತ ಹುಲಿ ಕಾರ್ತಿಕ್ ಅವರು ಅನುಬಂಧ ಅವಾರ್ಡ್ಸ್ ಕಾರ್ಯಕ್ರಮದ ವೇದಿಕೆಯಲ್ಲಿ ತುಕಾಲಿ ಸಂತೋಷ್ಗೆ ಬೈಯುವ ಹಾಸ್ಯ ಕಾರ್ಯಕ್ರಮದ ವೇಳೆ ಭೋವಿ ಸಮುದಾಯಕ್ಕೆ ಅವಮಾನ ಆಗುವಂತೆ ಜಾತಿ ನಿಂದನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.ಬೋವಿ ಸಮುದಾಯದ ಲೋಕೇಶ್ ಅನ್ನಪೂರ್ಣೇಶ್ವರಿನಗರದಲ್ಲಿ ದೂರು ನೀಡಲಾಗಿದ್ದು, ಈ ದೂರನ್ನು ಆಧರಿಸಿ ಎಫ್ಐಆರ್ ದಾಖಲಿಸಲಾಗಿದೆ.ಎಂಬ ಮಾಹಿತಿ ಲಭ್ಯವಾಗಿದೆ.ಇನ್ನು ದೂರಿನಲ್ಲಿ ಹುಲಿ ಕಾರ್ತಿಕ್ (ಎ1) ಅಲ್ಲದೆ ಸಂಭಾಷಣೆಕಾರ (ಸ್ಕ್ರಿಪ್ಟ್ ರೈಟರ್-ಎ2), ಕಾರ್ಯಕ್ರಮದ ನಿರ್ದೇಶಕ (ಅನುಬಂಧ ಡೈರೆಕ್ಟರ್ -ಎ3) ಹಾಗೂ ಕಾರ್ಯಕ್ರಮದ ನಿರ್ಮಾಪಕ (ಎ4) ವಿರುದ್ಧವೂ ದೂರು ದಾಖಲಿಸಲಾಗಿದೆ.ಈ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಹುಲಿ ಕಾರ್ತಿಕ್ ಪ್ರತಿಕ್ರಿಯೆ ನೀಡಿದ್ದು ನಾವು ಹಾಸ್ಯ ಕಲಾವಿದರು ಎಲ್ಲ ಸಮುದಾಯದವರನ್ನು ನಗಿಸೋದು ನಮ್ಮ ಕಾಯಕ ನಾವು ಯಾರಿಗೂ ನೋವು ಮಾಡುವ ಉದ್ದೇಶವಿಲ್ಲಾ.. ಒಂದು ವೇಳೆ ನನ್ನಿಂದ ಬೇಸರವಾಗಿದ್ರೆ ಕ್ಷಮಿಸಿ ಎಂದು ಪ್ರತಿಕ್ರಿಯಿಸಿದ್ದಾರೆ.







