• ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾಹಿತಿ

ರಾಜ್ಯದ ಕಲ್ಯಾಣ ಕರ್ನಾಟಕ ಪ್ರಾಥಮಿಕ ಪ್ರಾಂತ ಹೊರತುಪಡಿಸಿ ಉಳಿದ ಎಲ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ (ಎಲ್‌ಕೆಜಿ, ಯುಕೆಜಿ) ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾಹಿತಿ ನೀಡಿದರು.ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ಹಿನ್ನೆಲೆ ಎಲ್​ಕೆಜಿ, ಯುಕೆಜಿ ಪ್ರಾರಂಭಕ್ಕೆ ಚಿಂತನೆ ನಡೆದಿದೆ. ಶಾಲೆಗಳಲ್ಲಿ‌ ಮಾಡಲು ಚಿಂತನೆ ಕೊಟ್ಟಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ಮಾಡ್ತಿದ್ದಾರೆ. ಗುಣಮಟ್ಟದ ಶಿಕ್ಷಣವನ್ನು ನೀಡಬೇಕು. ಸರ್ಕಾರಿ ಶಾಲೆಗಳಲ್ಲೇ ಎಲ್ ಕೆ ಜಿ ಯು ಕೆಜಿ ಮಾಡಬೇಕೆಂಬ ಶಿಕ್ಷಣ ಇಲಾಖೆಯ ಕಳಕಳಿ ಇದೆ. ಆದರೆ ಅಂಗನವಾಡಿಯವರು ವಿರುದ್ಧವಿದ್ದಾರೆ. 40 ವರ್ಷಗಳಿಂದ ನಾವು ಕೆಲಸ ಮಾಡ್ತಿದ್ದೇವೆ. ಮಕ್ಕಳಿಗೆ ಕಲಿಸುವ ಕೆಲಸವೂ ಆಗ್ತಿದೆ. ಹಾಗಾಗಿ ಬೇಡ ಅನ್ನೋದು ಅವರ ವಾದ. ಈ ನಿಟ್ಟಿನಲ್ಲಿ ತಜ್ಞರ ಕಮಿಟಿ ರಚನೆ ಮಾಡುವ ಚರ್ಚೆಯಾಯ್ತು ಎಂದು ವಿಧಾನಸೌಧದಲ್ಲಿ ಸಚಿವೆ ಲಕ್ಷ್ಮೀ‌ ಹೆಬ್ಬಾಳ್ಕರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *