
ಹೊದ್ದು ಮಲಗಿದ ಅಧಿಕಾರಿಗಳೇ, ಸಿಬ್ಬಂದಿಗಳೇ ಎಚ್ಚರ ವಹಿಸಿ – ಸ್ಥಳೀಯರ ಅಕ್ರೋಶ

ಕೊಪ್ಪ : ತಾಲ್ಲೂಕಿನ ಕುರುಕುಬಳ್ಳಿಯಲ್ಲಿ ವಿದ್ಯುತ್ ಸ್ಪರ್ಶಿಸಿ ಹಸು ಸಾವಾಗಿದೆ,ನಾಲೂರು ಅಶೋಕ್ ರವರು ಸಾಕಿದ್ದ ಹಸು ದಿ 22 ರಂದು ಮೇವು ಅರಸಿ ಹೋಗಿದ್ದಾಗ ಮಧ್ಯಾಹ್ನ 3 ಘಂಟೆಯ ಸಮಯದಲ್ಲಿ ಆಕಸ್ಮಿಕವಾಗಿವಿದ್ಯುತ್ ತಂತಿ ಕಟ್ ಆಗಿ ಬಿದ್ದಿದ್ದನ್ನು ಸ್ಪರ್ಶಿಸಿ ಈ ಘಟನೆ ಸಂಭವಿಸಿದೆ.

ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿ, ಜಾನುವಾರು ವೈದ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಈ ಹಿಂದೆಯೂ ಕೂಡ ಇದೆ ರೀತಿ ಘಟನೆ ಸಂಭವಿಸಿದ್ದು, ವಿದ್ಯುತ್ ಅವಘಡ ತಪ್ಪಿಸುವಲ್ಲಿ ಮೆಸ್ಕಾಂ ಸಿಬ್ಬಂದಿ ವಿಫಲರಾಗಿದ್ದಾರೆ.

ಈ ಸಂಬಂಧ ಸಿಬ್ಬಂದಿ ಹಾಗೂ ಅಧಿಕಾರಿಗಳ ಗಮನಕ್ಕೆ ತಂದರೂ ಎಚ್ಚೆತ್ತು ಕೊಳ್ಳದ ಮೆಸ್ಕಾಂ ವಿರುದ್ಧ ಸ್ಥಳೀಯರು ಅಕ್ರೋಶ ಹೊರ ಹಾಕಿದ್ದಾರೆ. ಘಟನೆಗೆ ಪರಿಹಾರ ನೀಡಬೇಕೆಂದು ಸ್ಥಳೀಯರು ಮನವಿ ಸಲ್ಲಿಸಿದ್ದು ಅಧಿಕಾರಿಗಳು ಮನವಿಗೆ ಸ್ಪಂದಿಸಿದ್ದಾರೆ. ಜೊತೆಗೆ ಇಂತಹ ಘಟನೆಗಳು ಆಗದಂತೆ ಎಚ್ಚರ ವಹಿಸಲು ಸೂಚಿಸಿದ್ದಾರೆ.

