- ಗಣೇಶ ಹಾಗೂ ಈದ್ ಮಿಲಾದ್ ಪ್ರಯುಕ್ತ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ

ಶಿವಮೊಗ್ಗ ಜಿಲ್ಲೆಯಾದ್ಯಂತ ದಿ 07-09 – 2024ರಂದು ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ನಂತರ ವಿವಿದ ದಿನದಂದು ವಿಸರ್ಜನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದು, ಹಾಗೂ ದಿ 16-09 – 2024 ರಂದು ಜಿಲ್ಲೆಯಾದ್ಯಾಂತ ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬಗಳ ಆಚರಣೆ ಸಂದರ್ಭದಲ್ಲಿ, ಡಿಜೆ ಉಪಯೋಗಿಸುವುದರಿಂದ ಸಾರ್ವಜನಿಕರಿಗೆ ವಿದ್ಯಾರ್ಥಗಳಿಗೆ ವಯಸ್ಕರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ತೊಂದರೆಯಾಗುವುದರ ಜೊತೆಗೆ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವ ಸಾಧ್ಯತೆ ಇದ್ದು, ಸಾರ್ವಜನಿಕ ಹಿತಾಸಕ್ತಿಯಿಂದ ಸೌಹಾರ್ದತೆ ಹಾಗೂ ಶಾಂತಿ ಕಾಪಾಡುವ ಸಲುವಾಗಿ ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಾಂತ ಡಿಜೆ. ಸಿಸ್ಟಂ ನಿಷೇದಿಸಲು ಆದೇಶ ಹೊರಡಿಸಲು ಪೋಲೀಸ್ ಅಧಿಕ್ಷಕರು ವಿವರಿಸಿರುವ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಸೌಹಾರ್ದತೆ ಮತ್ತು ಶಾಂತಿ ಹಾಗೂ ಸಾರ್ವಜನಿಕ ಹಿತ ದೃಷ್ಟಿಯಿಂದ ಡಿಜೆ ಸಿಸ್ಟಿಂ ಗಳನ್ನು ನಿಷೇದಿಸಿ ಮಾನ್ಯ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ನೀಡಿದ್ದಾರೆ.




