- ಮಹಿಳಾ ಅಧಿಕಾರಿಗಳೇ ಬಂದಿಸಿದ್ದು ಯಾಕೆ ಗೊತ್ತಾ ?

ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು 35 ದಿನಗಳ ಬಳಿಕ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ಅಧಿಕಾರಿಗಳು ಬಂಧಿಸಿದರು.ಭಾರತೀಯ ಕಾಲಮಾನ ಪ್ರಕಾರ ಇಂದು ಸಂಜೆ 4.09 ಕ್ಕೆ ಜರ್ಮನಿಯ ಮ್ಯೂನಿಕ್ಮಿಂದ ಹೊರಟಿದ್ದ ವಿಮಾನದಲ್ಲಿ ಪ್ರಜ್ವಲ್ ರೇವಣ್ಣ ಹತ್ತಿರೋದು ಖಚಿತವಾಗಿತ್ತು. ಲುಫ್ತಾನ್ಸ್ ಏರ್ಲೈನ್ಸ್ನ LH764 ವಿಮಾನದ ಬ್ಯುಸಿನೆಸ್ ಕ್ಲಾಸ್ನಲ್ಲಿ ಪ್ರಜ್ವಲ್ ಪ್ರಯಾಣಿಸಿದ್ದು ಮಧ್ಯರಾತ್ರಿ 12.51ರ ಸುಮಾರಿಗೆ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು ಎಸ್ ಐ ಟಿ ತಂಡ ಬಂಧಿಸಿದೆ. *ಪ್ರಜ್ವಲ್ ನನ್ನ ಬಂದಿಸಿದ ಮಹಿಳಾ ಅಧಿಕಾರಿಗಳು* ಜೀಪ್ ಚಾಲಕ ಹೊರತುಪಡಿಸಿದ್ರೆ ಉಳಿದವರೆಲ್ಲ ಮಹಿಳಾ ಅಧಿಕಾರಿಗಳೇ ಇದ್ದರು. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತ ಮಹಿಳೆಯರು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಹೆಣ್ಣನ್ನು ಕೇವಲವಾಗಿ ನೋಡಿದ ಪ್ರಜ್ವಲ್ಗೆ ಮುಜುಗರ, ಅವಮಾನಿಸಲು, ನಾಚಿಕೆಪಡುವಂತಾಗಲಿ ಎಂದು ಮಹಿಳಾ ಅಧಿಕಾರಿಗಳ ಬಳಿ ಬಂಧಿಸಲು ಎಸ್ ಐ ಟಿ ಪ್ಲಾನ್ ಮಾಡಿ ಕೊಂಡಿತ್ತು.

