ಮಲೆನಾಡಿಗರ ಬೇಡಿಕೆಯನ್ನು ಸರ್ಕಾರ ಪುರಸ್ಕರಿಸಲಾಗಿದ್ದು,.ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಪಶ್ಚಿಮ ಘಟ್ಟ ವಲಯವನ್ನು ಪರಿಸರ ಸೂಕ್ಷ್ಮ ಪ್ರದೇಶವಾಗಿ ಘೋಷಣೆ ಮಾಡಿದಲ್ಲಿ ಅರಣ್ಯದಂಚಿನಲ್ಲಿ ವಾಸಿಸುತ್ತಿರುವ ಸಾವಿರಾರು ಕುಟುಂಬಗಳು ಒಕ್ಕಲೇಳಬೇಕಾದ ಸ್ಥಿತಿ ಬಂದಿದ್ದು.ಇದೀಗ ಮಲೆನಾಡಿಗರ ಆತಂಕವನ್ನು ನಿವಾರಿಸುವ ಉದ್ದೇಶದೊಂದಿಗೆ ಡಾ. ಕಸ್ತೂರಿ ರಂಗನ್ ವರದಿಯನ್ನು ನಡೆದ ಸಚಿವ ಸಂಪುಟ ಸಭೆಯು ಸಂಪೂರ್ಣವಾಗಿ ತಿರಸ್ಕರಿಸಿದೆ.ಈ ವೇಳೆ ಮಲೆನಾಡಿಗರು ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ.







