ಸಾಗರ :ತಾಲೂಕಿನ ತುಮರಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಜಡ್ಡಿನಬೈಲು ಗ್ರಾಮದ ಬಳಿ ಶರಾವತಿ ಹಿನ್ನೀರಿನಲ್ಲಿ ಮುಳುಗಿ ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದೆ.ತಾಲೂಕಿನ ಬ್ರಾಹ್ಮಣ ಕೆಪ್ಪಿಗೆ ಗ್ರಾಮದ ರವಿ (30) ಮೃತ ಯುವಕನಾಗಿದ್ದಾನೆ.ಮಂಗಳವಾರ ಬೆಳಿಗ್ಗೆ ಬಲೆ ತೆಗೆಯಲುಹೋದಾಗ ಮರಕ್ಕೆ ಸಿಲುಕಿದ್ದ ಬಲೆಯನ್ನು ಬಿಡಿಸುವ ವೇಳೆ ಹಿನ್ನೀರಿಗೆ ಇಳಿದಾಗ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿದ್ದಾನೆ ಎಂದು ಕಾರ್ಗಿಲ್ ಪೊಲೀಸ್ ಠಾಣೆಯಲ್ಲಿ ವರದಿಯಾಗಿದೆ.



