ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದ್ದು ಹಲವು ಗ್ರಾಮಗಳಿಗೆ ಪ್ರವಾಹದ ಭೀತಿ ಎದುರಾಗಿದೆ ಅಲ್ಲದೆ ಮಹಾಬಳೆಗೆ ಈಗಾಗಲೇ ಹಲವರು ಬಲಿಯಾಗಿದ್ದಾರೆ.

ಇದೀಗ ಭಾರತೀಯ ಹವಾಮಾನ ಇಲಾಖೆಯು ಮುಂದಿನ ಮೂರು ದಿನಗಳಲ್ಲಿ ರಾಜ್ಯದಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.ಉತ್ತರಕನ್ನಡ, ಉಡುಪಿ, ದಕ್ಷಿಣಕನ್ನಡ, ಕೊಡಗು, ಶಿವಮೊಗ್ಗ ಹಾಗು ಚಿಕ್ಕಮಂಗಳೂರು ಸೇರಿದಂತೆ

11 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.ಬಾಗಲಕೋಟೆ, ಯಾದಗಿರಿ, ಹಾವೇರಿ, ಗದಗ ಮತ್ತು ಹಾಸನ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಿಸಿದೆ. ಅದೇ ರೀತಿ ಬೆಳಗಾವಿ ಕಲಬುರ್ಗಿ, ವಿಜಯಪುರ ಮತ್ತು ಬೀದರ್ ಆರೇಂಜ್ ಅಲರ್ಟ್ ಘೋಷಿಸಿದೆ ಇನ್ನು ಬೆಂಗಳೂರು ನಗರದಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Oplus_131072
Oplus_131072

Leave a Reply

Your email address will not be published. Required fields are marked *