ಮಳೆ ಕಾಡು ಅಧ್ಯಯನದ ಸಲುವಾಗಿ ಆಸ್ಟ್ರೇಲಿಯಾ ದೇಶದ ಭಾರತೀಯ ಹೈಕಮಿಷನರ್ ಫಿಲಿಪ್ ಗ್ರೀನ್ ತೀರ್ಥಹಳ್ಳಿಯ ಆಗುಂಬೆಗೆ ಭೇಟಿ ನೀಡಿದ್ದು 3ದಿನ ಆಗುಂಬೆ ಹಾಗೂ ಸುತ್ತಮುತ್ತಲಿನ ಪರಿಸರವನ್ನು ಕಣ್ತುಂಬಿಕೊಳ್ಳಲಿದ್ದಾರೆ.ಕಾಳಿಂಗ ಫೌಂಡೇಶನ್ ಗೆ ಭೇಟಿ ನೀಡಿ ಕಾಳಿಂಗ ಸರ್ಪಗಳ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.ಈ ವೇಳೆ ಅರಣ್ಯ ಅಧಿಕಾರಿಗಳು ಅವರೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡರು ಇದೀಗ ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.



