- ರಾಜ್ಯ ಸರ್ಕಾರ ಮಹತ್ವದ ಆದೇಶ

ಬೆನ್ನುಹುರಿ ಅಪಘಾತದ ಅಂಗವಿಕಲರು, ಬುದ್ಧಿಮಾಂಧ್ಯತೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ತಿಂಗಳು 1,000 ರೂ. ಪ್ರೋತ್ಸಾಹಧನ ನೀಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ನಿರ್ದೇಶನಾಲಯ ಇವರು 2024-25ನೇ ಸಾಲಿನ ಆಯವ್ಯಯ ជ -1510, 2024-25 Cerebral Palsy, Muscular Dystrophy, Parkinsons , Multiple Sclerosis ಆರೈಕೆದಾರರಿಗೆ ಪ್ರತಿ ಮಾಹೆ ರೂ.1,000/-ಗಳ ಪ್ರೋತ್ಸಾಹಧನವನ್ನು ನೀಡಲಾಗುವುದು ಎಂದು ಮಾನ್ಯ ಮುಖ್ಯಮಂತ್ರಿಯವರು ಘೋಷಿಸಿರುತ್ತಾರೆ.ದಾಖಲೆಗಳೇನೇನು 1. ವಿಶಿಷ್ಟ ಗುರುತಿನ ಚೀಟಿ ಕಡ್ಡಾಯ (UDID CARD).2. ಅಂಗವಿಕಲತೆಯ ಪ್ರಮಾಣ ಶೇ.75 ಮತ್ತು ಅದಕ್ಕಿಂತ ಹೆಚ್ಚಾಗಿರಬೇಕು.3. ವಯಸ್ಸಿನ ಮಿತಿ ಇಲ್ಲ4. ಆದಾಯದ ಮಿತಿ ಇಲ್ಲ.5. ಜಿಲ್ಲಾ ಮಟ್ಟದ ಸಮಿತಿಯಲ್ಲಿ ಯೋಜನೆಯ ಫಲಾನುಭವಿಗಳನ್ನು ಆಯ್ಕೆ ಮಾಡುವುದು.6. ಜಿಲ್ಲಾ ಸಮಿತಿಯಲ್ಲಿ ಆಯ್ಕೆಯಾದ ಫಲಾನುಭವಿಯ ಆರೈಕೆದಾರರ ಬ್ಯಾಂಕ್ / ಅಂಚೆ ಕಛೇರಿ ಉಳಿತಾಯ ಖಾತೆಗೆ ಪ್ರೋತ್ಸಾಹಧನವನ್ನು ಜಮಾ ಮಾಡಬೇಕು.7. ಆಯ್ಕೆಯಾದ ವಿಕಲಚೇತನ ಫಲಾನುಭವಿಯ ಆರೈಕೆದಾರರು ಮರಣ ಹೊಂದಿದಲ್ಲಿ ಅಥವಾ ವಿಕಲಚೇತನ ಫಲಾನುಭವಿಯು ಲಿಖಿತ ಮನವಿಯ ಮೇರೆಗೆ ಬೇರೆ ಆರೈಕೆದಾರರನ್ನು ಜಿಲ್ಲಾ ಸಮಿತಿಯಲ್ಲಿ ಆಯ್ಕೆ ಮಾಡುವುದು.8. ವಿಕಲಚೇತನ ಫಲಾನುಭವಿ ಮರಣ ಹೊಂದಿದಲ್ಲಿ ಪ್ರೋತ್ಸಾಹಧನ ಮಂಜೂರಾತಿ ತಂತಾನೇ ರದ್ದಾಗುವುದು.ಈ ಆದೇಶವನ್ನು ಆರ್ಥಿಕ ಇಲಾಖೆಯ ಟಿಪ್ಪಣಿ ಸಂಖ್ಯೆ: ಆಇ 272 ವೆಚ್ಚ-10/2024, ದಿ:23.05.2024ರ ಸಹಮತಿ ಹಾಗೂ ಯೋಜನಾ ಇಲಾಖೆ ಟಿಪ್ಪಣಿ ಸಂಖ್ಯೆ: ಪಿಡಿಎಸ್ 44 ಐಎಂಎಂ 2024, ದಿನಾಂಕ:21.06.2024 ರ ಸಹಮತಿಯನ್ವಯ ಹೊರಡಿಸಲಾಗಿದೆ.
