
ರಾಜ್ಯದ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ಅ.31 ರಂದು ‘ರಾಷ್ಟ್ರೀಯ ಏಕತಾ ದಿನ’ ಆಚರಿಸುವಂತೆ ‘ಶಿಕ್ಷಣ ಇಲಾಖೆ’ ಆದೇಶ ಹೊರಡಿಸಿದೆ. *ಆದೇಶದಲ್ಲೇನಿದೆ*ಪ್ರತಿ ವರ್ಷ ಸರ್ದಾರ್ ವಲ್ಲಭಭಾಯಿ ಪಟೇಲ್ ರವರ ಜನ್ಮದಿನವನ್ನು ಅಕ್ಟೋಬರ್ 31 ರಂದು “ರಾಷ್ಟ್ರೀಯ ಏಕತಾ ದಿನವನ್ನಾಗಿ’ ದೇಶದಾದ್ಯಂತ ಬಹಳ ಉತ್ಸಾಹದಿಂದ ಆಚರಿಸಲಾಗುತ್ತದೆ ದಿನಾಂಕ : 31.10.2024 ರಂದು ಶಿಕ್ಷಕರು ಶಾಲಾ ಹಂತದಲ್ಲಿ ಪ್ರಾರ್ಥನಾ ವೇಳೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ರವರು ದೇಶದ ಏಕೀಕರಣಕ್ಕಾಗಿ, ದೇಶದ ಭದ್ರತೆಗಾಗಿ ತಮ್ಮನ್ನು ತಾವು ಸಮರ್ಪಿಸಿಕೊಂಡಿರುವುದನ್ನು ಸ್ಮರಿಸುತ್ತಾ ಕೆಳಕಂಡ ಪ್ರತಿಜ್ಞೆಯನ್ನು ತೆಗೆದುಕೊಳ್ಳುವುದು ಹಾಗೂ ಪಟೇಲ್ರವರ ದೂರದೃಷ್ಟಿ ದೇಶದ ಏಕತೆಯ ಭಾವನೆಗಳು ಹಾಗೂ ಮೌಲ್ಯಗಳ ಕುರಿತು ವಿದ್ಯಾರ್ಥಿಗಳಿಗೆ ಪ್ರಬಂಧ ಬರವಣಿಗೆ, ರಸಪ್ರಶ್ನೆ ಸ್ಪರ್ಧೆಗಳನ್ನು ಹಮ್ಮಿಕೊಂಡು, ಜಾಥಾ, ಏಕತಾ ಓಟ (Run for Unity) ಮೂಲಕ ಅವರ ಸಂದೇಶವನ್ನು ದೇಶವಾಸಿಗಳಲ್ಲಿ ಹರಡುವುದು ಎಂದು ಉಲ್ಲೆಖಿಸಲಾಗಿದೆ.









