• ಉಪಾಧ್ಯಕ್ಷರಾಗಿ ಗೀತಾ ರಮೇಶ್ ಆಯ್ಕೆ

ತೀರ್ಥಹಳ್ಳಿ : ಪಟ್ಟಣ ಪಂಚಾಯಿತಿಯ ಅಧ್ಯಕ್ಷರಾಗಿ ರೆಹಮತ್ ಉಲ್ಲಾ ಅಸಾದಿ, ಉಪಾಧ್ಯಕ್ಷರಾಗಿ ಗೀತಾ ರಮೇಶ್ ಮಂಗಳವಾರ ಆಯ್ಕೆಯಾದರು.15 ಸದಸ್ಯ ಬಲದ ಪಟ್ಟಣ ಪಂಚಾಯಿತಿಯ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ, ಉಪಾಧ್ಯಕ್ಷ ಸ್ಥಾನ ಬಿಸಿಎಂ-ಎ ವರ್ಗಕ್ಕೆ ಮೀಸಲಾಗಿತ್ತು. ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ರೆಹಮತ್ ಉಲ್ಲಾ ಅಸಾದಿ, ಗೀತಾ ರಮೇಶ್ 9 ಮತಗಳನ್ನು ಪಡೆದರು. ಬಿಜೆಪಿ ಪಕ್ಷದಿಂದ ಅಧ್ಯಕ್ಷ ಸ್ಥಾನಕ್ಕೆ ಸೊಪ್ಪುಗುಡ್ಡೆ ರಾಘವೇಂದ್ರ, ಉಪಾಧ್ಯಕ್ಷ ಸ್ಥಾನ್ಕಕೆ ಜ್ಯೋತಿ ಗಣೇಶ್ ಸ್ಪರ್ಧಿಸಿ 6 ಮತಗಳನ್ನು ಪಡೆದು ಪರಾಭವಗೊಂಡರು.

ಅಸಾದಿ 2008ರಲ್ಲಿ ಉಪಾಧ್ಯಕ್ಷರಾಗಿ, 2018 ರಲ್ಲಿ ಅಧ್ಯಕ್ಷರಾಗಿ ಈ ಹಿಂದೆ ಸೇವೆ ಸಲ್ಲಿಸಿದ್ದಾರೆ. ಗೀತಾ ಹಿಂದಿನ ಅವಧಿಯಲ್ಲಿ ಅಧ್ಯಕ್ಷರಾಗಿದ್ದರು. ಚುನಾವಣಾಧಿಕಾರಿ ಆಗಿ ತಹಶೀಲ್ದಾರ್ ಜಿ.ಬಿ. ಜಕ್ಕನಗೌಡರ್, ಮುಖ್ಯಾಧಿಕಾರಿ ಡಿ.ನಾಗರಾಜ ಕರ್ತವ್ಯ ನಿರ್ವಹಿಸಿದರು.ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ರೆಹಮತ್ ಉಲ್ಲಾ ಅಸಾದಿಯವರು ಹಾಗೂ ಗೀತಾ ರಮೇಶ್ ಇವರು ಉತ್ತಮ ಕಾರ್ಯ ಮಾಡಲಿ ಹಾಗೂ ಮಾರ್ಕೆಟ್ ರಸ್ತೆಯಲ್ಲಿರುವ ಶೌಚಾಲಯ ಗಬ್ಬು ನಾರುತ್ತಿದ್ದು ಈ ಬಗ್ಗೆ ಹಿಂದೆ ಸತ್ಯಶೋಧ ಮಾಧ್ಯಮ ವರದಿ ಮಾಡಿದ್ದು, ಶೌಚಾಲಯ ದುರಸ್ತಿ ಅಥವಾ ಶುಚಿತ್ವ ಕಾಪಾಡುವಲ್ಲಿ ಸಿಬ್ಬಂದಿ ನೇಮಿಸುವ ಬಗ್ಗೆ ವಿಶೇಷ ಗಮನ ಹರಿಸಬೇಕಿದೆ.

Leave a Reply

Your email address will not be published. Required fields are marked *