
https://sathyashodhanews.in/kannada-festival-in-koppa/ಇದನ್ನು ಓದಿ
ಕನ್ನಡದ ಚಿತ್ರರಂಗಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿ ಹೆಸರಾಂತ ನಟ ಅನಂತನಾಗ್, ಗ್ರಾಮಿ ಪ್ರಶಸ್ತಿ ಪುರಸ್ಕೃತ, ಸಿನಿಮಾ ಸಂಗೀತ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆ ನೀಡಿರುವ ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಸೇರಿದಂತೆ ನಾಲ್ವರು ಕನ್ನಡಿಗರಿಗೆ ಮಂಗಳವಾರ ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.ಅನಂತ್ನಾಗ್ ಅವರಿಗೆ ಪದ್ಮಭೂಷಣ, ಗ್ರ್ಯಾಮಿ ಪ್ರಶಸ್ತಿ ವಿಜೇತ ಭಾರತೀಯ ಸಂಗೀತ ನಿರ್ದೇಶಕ ರಿಕ್ಕಿ ಕೇಜ್, ಬೆಂಗಳೂರಿನ ಉದ್ಯಮಿ ಪ್ರಶಾಂತ್ ಪ್ರಕಾಶ್ ಹಾಗೂ ಬಾಗಲಕೋಟೆಯ ಗೊಂದಲಿ (ಜನಪದ ಹಾಡು) ಕಲಾವಿದ ವೆಂಕಪ್ಪ ಅಂಬಾಜಿ ಸುಗತೇಕರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.

