ಹಿರಿಯ ರಾಜಕಾರಣಿ ಹಾಲಿ ಕಾಂಗ್ರೆಸ್ ಶಾಸಕ , ಮಾಜಿ ಸಚಿವರೂ ಆಗಿದ್ದ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ. 94 ವರ್ಷದ ಶಾಮನೂರು ಶಿವಶಂಕರಪ್ಪ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.1931ರ ಜೂನ್ 16ರಂದು ದಾವಣಗೆರೆಯಲ್ಲಿ ಜನಿಸಿದ್ದ ಶಾಮನೂರು ಶಿವಶಂಕರಪ್ಪ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ವಿಧಾನಸಭೆಯ ಸದಸ್ಯರಾಗಿದ್ದು, ಅವರು ಭಾರತದಲ್ಲಿ ರಾಜ್ಯ ವಿಧಾನಸಭೆಯ ಅತ್ಯಂತ ಹಿರಿಯ ಸದಸ್ಯರಾಗಿದ್ದರು.

ಕಳೆದ ಮೂರು ದಶಕಗಳಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಖಜಾಂಚಿಯಾಗಿದ್ದಾರೆ ಮತ್ತು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರೂ ಆಗಿದ್ದಾರೆ, ಅವರು ಸಾದರ ಲಿಂಗಾಯತ ಸಮುದಾಯಕ್ಕೆ ಸೇರಿದವರು. ಪ್ರಸಿದ್ಧ ಶಿಕ್ಷಣ ತಜ್ಞ ಮತ್ತು ಕೈಗಾರಿಕೋದ್ಯಮಿಯಾಗಿ, ಅವರು ಬಾಪೂಜಿ ಶೈಕ್ಷಣಿಕ ಸಂಘದ ಅಧ್ಯಕ್ಷರಾಗಿದ್ದಾರೆ, ಇದು ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ & ಟೆಕ್ನಾಲಜಿ ಮತ್ತು ವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು ಉನ್ನತ ಶಿಕ್ಷಣದ ಅನೇಕ ವೃತ್ತಿಪರ ಸಂಸ್ಥೆಗಳನ್ನು ಒಳಗೊಂಡಂತೆ ಶಿಕ್ಷಣ ಸಂಸ್ಥೆಗಳ ಸರಪಣಿಯನ್ನು ಹೊಂದಿದೆ,ವಿಧಾನಸಭೆಗೆ ಆರು ಸಲ ಶಾಸಕರಾಗಿ, ಒಮ್ಮೆ ಸಂಸದರಾಗಿ ಆಯ್ಕೆಯಾಗಿದ್ದಾರೆ. 1997ರಲ್ಲಿ ದಾವಣಗೆರೆ ಲೋಕಸಭೆ ಮಧ್ಯಂತರ ಚುನಾವಣೆಯಲ್ಲಿ ಸೋಲು ಕಂಡಿದ್ದರು. ಐದು ದೇಶಕದ ರಾಜಕೀಯ ಜೀವನದಲ್ಲಿ ಒಂದು ಬಾರಿ ಸೋಲನ್ನಪ್ಪಿದ್ದಾರೆ. 1994, 2004, 2008, 2013, 2018, 2023 ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು.

Leave a Reply

Your email address will not be published. Required fields are marked *