- ಆರೋಪಿ ಯಾರು ? ಏನಿದು ಪ್ರಕರಣ ಸುದ್ದಿ ಓದಿ

ದಿನಾಂಕ:11-06-2024 ರಂದು ಮಧ್ಯಾಹ್ನ ಹುತ್ತಳ್ಳಿ ಗ್ರಾಮದ ವಾಸಿ ಗುರುಮೂರ್ತಿಯು ತನ್ನ ವಾಸದ ಮನೆಯ ಹಿಂಭಾಗದ ಅಡಿಕೆ ತೋಟದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದಾನೆ ಎಂದು ಬಂದ ಖಚಿತ ಮಾಹಿತಿಯ ಮೇರೆಗೆ ಮಿಥುನ್ ಕುಮಾರ್ ಜಿ.ಕೆ ಐಪಿಎಸ್, ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ,ಶ್ರೀ ಅನಿಲ್ ಕುಮಾರ್ ಭೂಮಾರೆಡ್ಡಿ,ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಶಿವಮೊಗ್ಗ ಜಿಲ್ಲೆ ಮತ್ತು ಕಾರಿಯಪ್ಪ ಎ.ಜಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಶಿವಮೊಗ್ಗ ಜಿಲ್ಲೆರವರ ಮಾರ್ಗದರ್ಶನದಲ್ಲಿ ಗಜಾನನ ವಾಮನ ಸುತರ, ಪೊಲೀಸ್ ಉಪಾಧೀಕ್ಷಕರು, ತೀರ್ಥಹಳ್ಳಿ ಉಪ ವಿಭಾಗ ರವರ ನೇತೃತ್ವದ ಸಿಬ್ಬಂಧಿಗಳನ್ನೊಳಗೊಂಡ ತಂಡವು ಸ್ಥಳಕ್ಕೆ ಹೋಗಿ ದಾಳಿ ನಡೆಸಿ ಅಡಿಕೆ ಗಿಡಗಳ ಮದ್ಯೆ ಬೆಳೆದಿದ್ದ *ಅಂದಾಜು ಮೌಲ್ಯ 2,50,000/- ರೂಗಳ 9 ಕೆಜಿ 524 ಗ್ರಾಂ ತೂಕದ ಒಟ್ಟು 14 ಹಸಿ ಗಾಂಜಾ ಗಿಡಗಳನ್ನು* ಅಮಾನತ್ತು ಪಡಿಸಿಕೊಂಡು, ಆರೋಪಿತನ ವಿರುದ್ಧ *ತೀರ್ಥಹಳ್ಳಿ ಪೊಲೀಸ್ ಠಾಣೆ* ಗುನ್ನೆ ಸಂಖ್ಯೆಃ 0148/2024 ಕಲಂ 8C, 20 (a) (i) NDPS ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತದೆ.

