ಅಕ್ರಮ ಚಟುವಟಿಕೆ ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು – ರಂಜಿತ್ ಎಸ್

ತೀರ್ಥಹಳ್ಳಿ :ತಾಲೂಕು ಅಧಿಕಾರಿಗಳೊಂದಿಗೆ ತಹಶೀಲ್ದಾರ್ ಎಸ್ ರಂಜಿತ್ ತಾಲೂಕಿನ ವಿವಿಧ ಹೋಟೆಲ್‌ಗಳು ಹಾಗೂ ಗ್ಯಾಸ್ ಸ್ಟೇಷನ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು . ಪರಿಶೀಲನೆ ವೇಳೆ ಎಲ್‌ಪಿಜಿ ಸಿಲಿಂಡರ್‌ಗಳ ಲಭ್ಯತೆ ಮತ್ತು ಅಗತ್ಯ ಸರಕುಗಳ ಸಮರ್ಪಕ ಪೂರೈಕೆ ಇರುವುದನ್ನು

ಖಚಿತಪಡಿಸಿಕೊಂಡು ಜೊತೆಗೆ ವ್ಯಾಪಾರಿಗಳಿಗೆ ಭದ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಲಾಗಿದ್ದು, ಯಾವುದೇ ಅಕ್ರಮ ಚಟುವಟಿಕೆಗಳು ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

Leave a Reply

Your email address will not be published. Required fields are marked *