ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಖಾಸಗಿ ಹೋಟೆಲ್ ವೊಂದರಲ್ಲಿ ವ್ಯಕ್ತಿಯೊಬ್ಬರು ನೇಣಿಗೆ ಶರಣಾದ ಘಟನೆ ನಡೆದಿದೆ.ಬಾಳೆಬೈಲಿನಲ ಖಾಸಗಿ ಹೋಟೆಲ್ (ಲಾಡ್ಜ್ )ನಲ್ಲಿ ಎರಡು ದಿನದಿಂದ ರೂಮ್ ಬಾಡಿಗೆ ಪಡೆದಿದ್ದ ಉಡುಪಿ ಮೂಲದ ಪ್ರಸನ್ನ ಶೆಟ್ಟಿ ( 45) ಎಂಬ ವ್ಯಕ್ತಿ ವ್ಯವಹಾರದಲ್ಲಿ ನಷ್ಟ ಅನುಭವಿಸಿದ ಕಾರಣ ರೂಮ್ ನಲ್ಲೆ ಆತ್ಮಹತ್ಯೆಗೆ ಶರಣಾಗಿರಬಹುದು ಎಂಬ ಶಂಕೆ ವ್ಯಕ್ತಪಡಿಸಲಾಗಿದೆ.ಬುಧವಾರ ಮಧ್ಯಾಹ್ನದಿಂದ ರೂಮ್ ಬಂದ್ ಆದ ಕಾರಣ ಅನುಮಾನದಿಂದ ಬಾಗಿಲು ತೆರೆದಾಗ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *