
ಶಿವಮೊಗ್ಗ ,: ತೀರ್ಥಹಳ್ಳಿ ತಾಲೂಕಿನ ಬೇಗುವಳ್ಳಿ ಬಳಿ ಭೀಕರ ಅಪಘಾತ ನಡೆದಿದ್ದು ಎರಡು ಬೈಕ್ಗಳ ನಡುವೆ ಡಿಕ್ಕಿಯಾಗಿದ್ದು, ನಾಲ್ಕು ಮಂದಿಗೆ ಗಾಯಗಳಾಗಿದೆ.ಇದರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ ಎಂಬ ಸುದ್ದಿ ಲಭ್ಯವಾಗಿದೆ

ಇಲ್ಲಿನ ಬೆಜ್ಜವಳ್ಳಿ ಜಾತ್ರೆಗೆ ಹೋಗಿ ವಾಪಸ್ ಆಗುತ್ತಿದ್ದ ವೇಳೆ ಮಂಡಗದ್ದೆ ಸಮೀಪದ ದಂಪತಿಗಳಿದ್ದ ಬೈಕ್ಗೆ ಮೇಲಿನ ತೂದೂರು, ಬೇಗುವಳ್ಳಿ ನಿವಾಸಿಗಳಿದ್ದ ಬೈಕ್ ಹಿಂದಿನಿಂದ ಡಿಕ್ಕಿಯಾಗಿದೆ. ಆದರೆ ಡಿಕ್ಕಿಯಾದ ಇನ್ನೊಂದು ಬೈಕ್ನಲ್ಲಿ ಇಬ್ಬರು ಹುಡುಗರಿಗೆ ಹೆಚ್ಚು ಹೊಡೆತ ಬಿದ್ದಿದ್ದು, ಅವರನ್ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.



