• A14 ಆರೋಪಿ ಪ್ರದೂಶ್ ಬೆಳಗಾವಿಯ ಹಿಂಡಲಗಾ ಜೈಲಿಗೆ ರವಾನೆ

ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣದಲ್ಲಿರುವ ಇಬ್ಬರು ಆರೋಪಿಗಳನ್ನು ಗುರುವಾರ ಆ.29ರಂದು ಶಿವಮೊಗ್ಗ ಜೈಲಿಗೆ ಕರೆತರಲಾಗಿದೆ.ರೇಣುಕಾಸ್ವಾಮಿ ಕೊಲೆ ಆರೋಪಿಗಳಾದ A6 ಜಗದೀಶ್ ಹಾಗೂ A12 ಲಕ್ಷ್ಮಣ್ ಶಿವಮೊಗ್ಗ ಜೈಲಿಗೆ ಸ್ಥಳಾಂತರವಾಗಿದ್ದಾರೆರಾಜ್ಯದಲ್ಲೇ ಹೈಟೆಕ್ ಕಾರಾಗೃಹ ಎಂಬ ಖ್ಯಾತಿ ಹೊಂದಿರುವ ಶಿವಮೊಗ್ಗ ಜೈಲು ಕೊರಿಯನ್‌ ಮಾದರಿಯಲ್ಲಿದೆ. 270 ಕೊಠಡಿ ಹೊಂದಿರುವ ಕೇಂದ್ರ ಕಾರಾಗೃಹದಲ್ಲಿ ಪ್ರಸ್ತುತ 773 ಜನ ಖೈದಿಗಳಿದ್ದಾರೆ.ಇನ್ನು A14 ಆರೋಪಿ ಪ್ರದೂಶ್ ನನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಕಳುಹಿಸಲಾಗುತ್ತದೆ. ಜೈಲಿನಲ್ಲಿ ಸಿಸಿಟಿವಿ ಅಳವಡಿಸುವ ಕಾರ್ಯ ನಡೆಯುತ್ತಿದೆ. ಹೊರಗೆ ಸಿಸಿಟಿವಿ ಹಾಕುವ ಕೆಲಸ ಮಾಡುತ್ತಿದ್ದೇವೆ ಎಂದು ಹಿಂಡಲಗಾ ಕಾರಾಗೃಹದ ಸಹಾಯಕ ಅಧಿಕ್ಷಕ ವಿ. ಕೃಷ್ಣಮೂರ್ತಿ ಹೇಳಿದ್ದಾರೆ.

Leave a Reply

Your email address will not be published. Required fields are marked *