

ರಾಜ್ಯದಲ್ಲಿ ಮಳೆ ಕೊಂಚ ತಗ್ಗಿದ್ದು ಇದೀಗ ಮತ್ತೆ ಜೂನ್ 12 ರಿಂದ ಮತ್ತೆ ಶುರುವಾಗಲಿದೆ. ಶಿವಮೊಗ್ಗ, ಚಿಕ್ಕಮಗಳೂರು,ಉಡುಪಿ, ದ ಕನ್ನಡ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ಬೆಳಗಾವಿ, ಧಾರವಾಡ,

ವಿಜಯಪುರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೊಡಗು, ವಿಜಯನಗರ, ಬೀದರ್, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂಗಾರು ಚುರುಕು ಪಡೆಯುತ್ತಿರುವುದರಿಂದಾಗಿ ರೈತರು ಸಂತಸ ವ್ಯಕ್ತಪಡಿಸುತ್ತಿದ್ದಾರೆ.
